
ತುಮಕೂರು:ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರನ್ನಾಗಿ ಬಟವಾಡಿಯ ಹೆಚ್.ಜಿ. ಚಂದ್ರಶೇಖರ್ ಅವರನ್ನು ಸರಕಾರ ನೇಮಕ ಮಾಡಿ ಆದೇಶಿಸಿದೆ. ಸದಸ್ಯರುಗಳನ್ನಾಗಿ ಸತ್ಯಮಂಗಲದ ಎಸ್.ಹೆಚ್. ಜಗದೀಶ್, ಹೊನ್ನುಡಿಕೆ ಹ್ಯಾಂಡ್ಪೋಸ್ಟ್ನ ಮಾಯರಂಗಣ್ಣ, ಸಿರಾಗೇಟ್ ಟೂಡಾ ಲೇಔಟ್ನ ಸಿ.ಹೆಚ್. ನಾಗರತ್ನ ಅವರನ್ನು ಸರ್ಕಾರ ನೇಮಕ ಮಾಡಿದೆ. ಈ ನೂತನ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ಮುಂದಿನ ಮೂರು ವರ್ಷದ ಅವಧಿಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ನೇಮಕ ಮಾಡಿರುವುದಾಗಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.

More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು