web stats

Madhugirinews

#1NewsofMadhugiri

ರೈಲು ಹಾಗೂ ಹೆದ್ದಾರಿ ಸಾರಿಗೆ ಆಧುನೀಕರಣ-ಸಚಿವ ಬಿ.ಸಿ. ನಾಗೇಶ್

ತುಮಕೂರು: ಜನಸಾಮಾನ್ಯರ ಸಾರಿಗೆಯೆಂದೇ ಕರೆಯುವ ರೈಲು ಸಾರಿಗೆ ಮತ್ತು ಹೆದ್ದಾರಿ ರಸ್ತೆಗಳನ್ನು ಆಧುನಿಕರಣ ಮಾಡುವ ಕೆಲಸಗಳನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.
ನಗರದ ರೈಲ್ವೆ ನಿಲ್ದಾಣದಲ್ಲಿ ತುಮಕೂರು-ಅರಸೀಕರೆ ಮಾರ್ಗ ವಿದ್ಯುತ್ ಚಾಲಿತ ರೈಲು ಸೇವೆಗೆ ಹಸಿರು ನಿಶಾನೆ ತೋರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ತುಮಕೂರು- ಅರಸೀಕೆರೆ ಮಾರ್ಗದಲ್ಲಿ ಸಾಕಷ್ಟು ರೈಲುಗಳಿದ್ದರೂ ಜನಸಾಮಾನ್ಯರ ಓಡಾಟಕ್ಕೆ ಅನುಕೂಲವಾಗುವಂತಹ ರೈಲು ವ್ಯವಸ್ಥೆಯಿರಲಿಲ್ಲ. ಇಂದು ಕೇಂದ್ರ ಸರ್ಕಾರ ಈ ರೈಲ್ವೆ ಮಾರ್ಗವನ್ನು ವಿದ್ಯುದ್ದೀಕರಣಗೊಳಿಸಿ ಹೊಸ ಡೆಮು ರೈಲನ್ನು ಸಾಮಾನ್ಯರ ಓಡಾಟಕ್ಕೆ ಒದಗಿಸಿದೆ ಎಂದರು.

ಮೀಟರ್ ಗೇಜ್ ಮತ್ತು ಬ್ರಾಡ್ ಗೇಜ್ ಮಾರ್ಗಗಳ ಕಾಮಗಾರಿಗಳನ್ನು 2018ರಲ್ಲಿ ಪ್ರಾರಂಭಿಸಿ 2022ರಲ್ಲಿ ಲೋಕಾರ್ಪಣೆ ಮಾಡುತ್ತಿರುವುದು ಅಭಿವೃದ್ಧಿಯ ವೇಗವನ್ನು ತಿಳಿಯಬಹುದಾಗಿದೆ ಎಂದರು. ಈ ಹಿಂದೆ ರೈಲು ಅತ್ಯಂತ ವಾಯುಮಾಲಿನ್ಯಕಾರಕ ಸಾರಿಗೆ ಎನ್ನುತ್ತಿದ್ದರು. ಇಂದು ರೈಲ್ವೆ ಮಾರ್ಗಗಳನ್ನು ವಿದ್ಯುದ್ದೀಕರಣಗೊಳಿಸಿ ಮಾಲಿನ್ಯರಹಿತ ಸಾರಿಗೆ ಮಾಡಲಾಗುತ್ತಿದೆ ಎಂದರಲ್ಲದೇ, ರೈಲು ಮತ್ತು ಬಸ್ ನಿಲ್ದಾಣಗಳನ್ನು ಅತ್ಯಂತ ಕೊಳಕು ಪ್ರದೇಶಗಳೆಂಬAತೆ ಕಾಣುತ್ತಿದ್ದರು. ಇಂದು ವಿದ್ಯುತ್ ದೀಪ, ಕುಡಿಯುವ ನೀರು ಸೇರಿ ಅತ್ಯಾಧುನಿಕ ಸೇವೆಗಳನ್ನು ಕಲ್ಪಿಸಿ ವಿಮಾನ ನಿಲ್ದಾಣಗಳ ಮಾದರಿಯಲ್ಲಿ ಆಧುನಿಕರಣಗೊಳಿಸಲಾಗುತ್ತಿದೆ ಎಂದರು. ತುಮಕೂರು, ತಿಪಟೂರು ಅರಸೀಕೆರೆ ಮಾರ್ಗವಾಗಿ ಮತ್ತೊಂದು ಪಾಸ್ಟ್ ಪ್ಯಾಸೆಂಜರ್ ರೈಲು ಓಡಿಸಲು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಸಂಸದ ಜಿ.ಎಸ್ ಬಸವರಾಜು ಮಾತನಾಡಿ, ಉಪನಗರ ರೈಲು ವ್ಯವಸ್ಥೆಯಿಂದಾಗಿ ತುಮಕೂರು ವೇಗವಾಗಿ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತಿದೆ. ತುಮಕೂರು-ಅರಸೀಕೆರೆ ರೈಲು ಮಾರ್ಗ ವಿದ್ಯುದ್ದೀಕರಣಗೊಳಿಸಿ ಹೊಸ ಡೆಮು ರೈಲನ್ನು ನೀಡಿರುವುದರಿಂದ ಈ ಭಾಗದ ಜನಸಾಮಾನ್ಯರ ಕನಸು ಕೈಗೂಡಿದೆ ಎಂದರು. ಕೇಂದ್ರ ಸರ್ಕಾರವು ರೈಲು ಮತ್ತು ರಸ್ತೆಗಳ ಪುನರಾಭಿವೃದ್ಧಿಗೊಳಿಸುವುದು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವುದಕ್ಕಾಗಿ 33 ಸಾವಿರ ಕೋಟಿ ರೂ.ಗಳ ಕಾರ್ಯಯೋಜನೆಯ ಅನುಷ್ಠಾನಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದು ತಿಳಿಸಿದರು. ತುಮಕೂರು- ದಾವಣಗೆರೆ, ತುಮಕೂರು- ರಾಯದುರ್ಗ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿದೆ. ಮಳವಳ್ಳಿ- ತುಮಕೂರು ಮಾರ್ಗದ ರೈಲ್ವೆ ಯೋಜನೆಯೂ ಬರಲಿದ್ದು, ತುಮಕೂರು ನಿಲ್ದಾಣವನ್ನು ಆಧುನೀಕರಣಗೊಳಿಸಿ 8 ಪ್ಲಾಟ್ ಫಾರಂಗಳನ್ನಾಗಿ ರೂಪಿಸಬೇಕಿದೆ. ಇದಕ್ಕಾಗಿ ಬೇಕಾಗಿರುವ 8-10 ಹತ್ತು ಎಕರೆ ಭೂಮಿಯನ್ನು ಪಡೆದು ಅಭಿವೃದ್ಧಿಗೊಳಿಸಬೇಕೆಂದು ತಿಳಿಸಿದರು.

ಇದಕ್ಕೂ ಮುನ್ನ ಬೆಂಗಳೂರಿನ ಕೆಂಗೇರಿಯ ಕೊಮ್ಮಘಟ್ಟ ಮೈದಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿನ ಸರ್.ಎಂ. ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಅರಸಿಕೇರೆ-ತುಮಕೂರು (96 ಕಿ.ಮೀ) ಯಲಹಂಕ-ಪೆನುಗೊAಡ(120ಕಿ.ಮೀ) ಕೊಂಕಣ ರೈಲ್ವೆ ಜಾಲದ(740ಕಿ.ಮೀ) ಶೇ.100ರಷ್ಟು ವಿದ್ಯುದ್ದೀಕರಣಗೊಂಡಿರುವ ಅರಸೀಕೆರೆ, ತುಮಕೂರು, ಯಲಹಂಕದಿAದ ಪ್ರಯಾಣಿಕರ ರೈಲು ಸೇವೆಗಳು ಹಾಗೂ ರತ್ನಗಿರಿ, ಮಡಗಾಂವ್ ಮತ್ತು ಉಡುಪಿಯಿಂದ ವಿದ್ಯುತ್ ಸೇವೆಗಳಿಗಾಗಿ ಆನ್‌ಲೈನ್ ಲಿಂಕ್ ಮೂಲಕ ಹಸಿರು ನಿಶಾನೆ ತೋರಿಸಿದರು.

 

You may have missed