
ತುಮಕೂರು: ಒಂಟಿಯಾಗಿ ಮನೆಯಲ್ಲಿದ್ದ ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಹಿಂಡಿಸಿಗೆರೆ ಗ್ರಾಮದಲ್ಲಿ ನಡೆದಿದೆ.
ಗುಬ್ಬಿ ತಾಲೂಕಿನ ಹಿಂಡಿಸಿಗೆರೆ ಗ್ರಾಮದ ತೋಟದ ಮನೆ ನಿವಾಸಿ ಮಂಜುಳಾ (38) ಹತ್ಯೆಯಾದ ಮಹಿಳೆ. ಪತಿ ಕಳೆದುಕೊಂಡು ಪುತ್ರನ ಜೊತೆ ತೋಟದಮನೆಯಲ್ಲಿ ವಾಸವಾಗಿದ್ದ ಮಂಜುಳಾ ಇತ್ತೀಚಿಗೆ ಮಗನ ಮದುವೆ ಮಾಡಿದ್ದರು. ಪತ್ನಿ ಊರಿಗೆ ಮಗ ತೆರಳಿದ್ದ ಸಂದರ್ಭ ಮನೆಯಲ್ಲಿ ಒಂಟಿಯಾಗಿದ್ದ ಸಮಯ ತಿಳಿದು ಹಂತಕರು ಈ ಕೃತ್ಯವೆಸಗಿದ್ದಾರೆ.
ಬೆಳಿಗ್ಗೆ ತೋಟದಮನೆ ಬಳಿ ಮೈದುನಾ ಬಂದ ವೇಳೆ ಈ ಹತ್ಯೆ ಬೆಳಕಿಗೆ ಬಂದಿದೆ. ಸಿ.ಎಸ್.ಪುರ ಪೊಲೀಸ್ ಠಾಣೆಗೆ ವಿಷಯ ತಿಳಿದ ತಕ್ಷಣ ಕಾರ್ಯ ಪ್ರವೃತ್ತರಾಗಿ ಹಂತಕರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಶೋಕ್.ಕೆ.ವಿ., ಅಪರ ವರಿಷ್ಠಾಧಿಕಾರಿ ಗೋಪಾಲ್, ಡಿವೈಎಸ್ಪಿ ಶೇಖರ್, ಸಿಪಿಐ ರಾಘವೇಂದ್ರ, ಪಿಎಸ್ಐ ಧರ್ಮಾಂಜಿ ಭೇಟಿ ನೀಡಿದರು. ಬೆರಳಚ್ಚು ತಜ್ಞರು, ಶ್ವಾನದಳ ಜೊತೆ ತನಿಖೆ ಆರಂಭಿಸಲಾಗಿದೆ.

More Stories
ಕಲಿಕಾ ಹಬ್ಬ ಕಲಿಕೆಯನ್ನು ಅಳೆಯಲು ಉತ್ತಮ ವೇದಿಕೆ
ಸುಬ್ರಹ್ಮಣ್ಯಸ್ವಾಮಿ ಸನ್ನಿಧಿಯಲ್ಲಿ ರಾಜಣ್ಣ, ಸೋಮಣ್ಣ ಸಮ್ಮಿಲನ
ಎತ್ತಿನಹೊಳೆ ಯೋಜನೆಗೆ ರಾಜ್ಯ ಸರಕಾರ ತನ್ನ ಪಾಲಿನ ಹಣ ಮೀಸಲಿಡಲಿ- ವಿಸೋಮಣ್ಣ