
ACCIDENT NEWS|| BREKING NEWS
ಮಧುಗಿರಿ/ಕೊಡಿಗೇನಹಳ್ಳಿ: ಚಿಕ್ಕಮಾಲೂರಿನಿಂದ ಇಟ್ಟಿಗೆ ಲೋಡ್ ಖಾಲಿ ಮಾಡಿ ಹೋಗುತಿದ್ದ ವೇಳೆ ಗುಂಡಿ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿ ಹೊಡೆದ ಘಟನೆ ವರದಿಯಾಗಿದೆ
ಹೋಬಳಿಯ ದೊಡ್ಡಮಾಲೂರು ಗ್ರಾಮದ ಹೊರವಲಯದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಬಳಿ ಘಟನೆ ನಡೆದಿದೆ. ಪಕ್ಕದ ತಾಲ್ಲೂಕಿನ ಹಾಲಗಾನಹಳ್ಳಿಯಿಂದ ಚಿಕ್ಕಮಾಲೂರಿಗೆ ಇಟ್ಟಿಗೆ ಲೋಡ್ ಸಾಗಿಸಲು ಹಿಂತಿರುಗಿ ಹೋಗುವಾಗ ಘಟನೆ ನಡೆದಿದ್ದು ತಿರುವಿನ ಗುಂಡಿ ತಪ್ಪಿಸಲು ಹೋಗಿ ದುರ್ಘಟನೆ ಸಂಭವಿಸಿದೆ.
ಹಾಲಗಾನಹಳ್ಳಿ ದರ್ಶನ್ (20 ವರ್ಷ) ಸ್ಥಳದಲ್ಲೇ ಮೃತಪಟ್ಟಿದ್ದು, ರಮೇಶ್ (26 ವರ್ಷ) ಎಂಬಾತನ ಸ್ಥಿತಿ ಚಿಂತಾಜನಕವಾಗಿದೆ. ಅಜಿತ್ (24 ವರ್ಷ) ಎಂಬುವವನಿಗೆ ಕಾಲು ಮುರಿದ್ದು ಅಂಜಪ್ಪ ಸೇರಿದಂತೆ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಗಾಯಾಳನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಇನ್ನೂ ರಸ್ತೆಯಲ್ಲಿ ಆಳವಾದ ಗುಂಡಿಗಳು ಬಿದ್ದು ರಸ್ತೆ ಹಾಳಾಗಿದ್ದು ಇಂಹತ ಅಪಘಾತ ಪ್ರಕರಣ ಗಳು ಮಾಮೂಲಿಯಾಗಿದ್ದು ಅಮಾಯಕ ಜೀವಗಳು ಬಲಿಯಾಗುತ್ತಿವೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪಿಎಸೈ ನಾಗರಾಜು ಸೇರಿದಂತೆ ಮಂಜುನಾಥ್ ಭೇಟಿ ನೀಡಿದ್ದಾರೆ.

More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು